SHOP HERE

Welcome To Always Lucky

View life as a continuous learning experience.

Saturday, April 25, 2015

apaara keerthi - vijayanagarada veeraputhra

ಚಿತ್ರ: ವಿಜಯನಗರದ ವೀರಪುತ್ರ
ಸಾಹಿತ್ಯ : ಆರ್.ಎನ್.ಜಯಗೋಪಾಲ್
ಸಂಗೀತ : ವಿಶ್ವನಾಥ್ - ರಾಮಮೂರ್ತಿ
ಗಾಯನ : ಪಿ.ಬಿ.ಶ್ರೀನಿವಾಸ್

ಅರಳೆ ರಾಶಿಗಳಂತೆ ಹಾಲ್ಗಡಲ ಅಲೆಯಂತೆ
ಆಗಸದೆ ತೇಲುತಿದೆ ಮೋಡ
ನೆರೆನೋಟ ಹರಿದಂತೆ ಪಸರಿಸಿಹ ಗಿರಿಪಂಕ್ತಿ
ಹಸಿ ಹಸಿರು ವನರಾಜಿ ನೋಡ....

ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು
ಕರ್ನಾಟವಿದುವೆ ನೃತ್ಯ ಶಿಲ್ಪ ಕಲೆಯ ಬೀಡಿದು
ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು
ಕರ್ನಾಟವಿದುವೆ ನೃತ್ಯ ಶಿಲ್ಪ ಕಲೆಯ ಬೀಡಿದು
ಅಪಾರ ಕೀರ್ತಿಯೇ...

ಮಾತೆ ತುಂಗಭದ್ರೆ ಹರಿಯುತಿಹಳು ಇಲ್ಲಿ
ಮಾನವನ ಪಾಪವನು ತೊಳೆವ ಕಲ್ಪವಲ್ಲಿ
ಮಾನವನ ಪಾಪವನು ತೊಳೆವ ಕಲ್ಪವಲ್ಲಿ

ದೇವ ವಿರೂಪಾಕ್ಷ ಈವ ನಮಗೆ ರಕ್ಷ
ಜೀವಿಗೆ ತಾ ನೀಡುವನು ಧರ್ಮದ ದೀಕ್ಷ
ಜೀವಿಗೆ ತಾ ನೀಡುವನು ಧರ್ಮದ ದೀಕ್ಷ

ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು
ಕರ್ನಾಟವಿದುವೆ ನೃತ್ಯ ಶಿಲ್ಪ ಕಲೆಯ ಬೀಡಿದು
ಅಪಾರ ಕೀರ್ತಿಯೇ...

ಕಡಿದು ಸುತ್ತಮುತ್ತಲಿದ್ದ ಗೊಂಡಾರಣ್ಯ
ಸ್ಥಾಪಿಸಿದನು ವಿಜಯನಗರ ವಿದ್ಯಾರಣ್ಯ
ಹಕ್ಕಬುಕ್ಕರಾಳಿ ಭವ್ಯತೆಯನು ತಾಳಿ
ದಿಕ್ಕು ದಿಕ್ಕು ಶಾಂತಿ ಸುಖದ ಕಹಳೆಯು ಕೇಳಿ

ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು
ಕರ್ನಾಟವಿದುವೆ ನೃತ್ಯ ಶಿಲ್ಪ ಕಲೆಯ ಬೀಡಿದು
ಅಪಾರ ಕೀರ್ತಿಯೇ...

No comments:

Post a Comment