SHOP HERE

Welcome To Always Lucky

View life as a continuous learning experience.

Tuesday, February 16, 2016

ಆರು ಹಿತವರು ನಿನಗೆ ಮೂರು ಮಂದಿಗಳೊಳಗೆ

ಹಾಡು: ಆರು ಹಿತವರು ನಿನಗೆ
ರಚನೆ: ಪುರಂದರದಾಸ
ಗಾಯನ: ?

ಆರು ಹಿತವರು ನಿನಗೆ ಮೂರು ಮಂದಿಗಳೊಳಗೆ
ನಾರಿಯೋ ಧಾರುಣಿಯೋ ಬಲು ಧನದ ಸಿರಿಯೋ

ಅನ್ಯರಲಿ ಜನಿಸಿದ ಅಂಗನೆಯ ಕರೆತಂದು
ತನ್ನ ಮನೆಗೆ ಅವಳ ಯಜಮಾನಿಯೆನಿಸಿ
ಭಿನ್ನವಿಲ್ಲದ ಅರ್ಧ ದೇಹಯೆನಿಸುವ ಸತಿಯು
ಕಣ್ಣಿನಲಿ ನೋಡಲು ಅಂಜುವಳು ಕಾಲವಶದಿ

ಮುನ್ನ ಶತಕೋಟಿ ರಾಯರುಗಳಾಳಿದ ನೆಲವ
ತನ್ನದೆಂದೆನುತ ಶಾಸನವ ಬರೆಸಿ
ಬಿನ್ನಣದ ಮನೆಕಟ್ಟಿ ಕೋಟೆ ಕೊತ್ತಳವಿಕ್ಕಿ
ಚೆನ್ನಿಗನ ಅಸುವಳಿಯೇ ಹೊರಗೆ ಹಾಕುವರು

ಅಸ್ಥಿರದ ದೇಹವಿದು ನೆಚ್ಚಿ ನೀ ಕೆಡಬೇಡ
ಸ್ವಸ್ಥ್ಯದಲಿ ನೆನೆ ಕಂಡ್ಯ ಹರಿಪಾದವ ಚಿತ್ತದೊಳು
ಶುದ್ಧಿಯಿಂ ಪುರಂದರ ವಿಠಲನೇ
ಉತ್ತಮೋತ್ತಮ ಎಂದು ಸುಖಿಯಾಗು ಮನುಜ

Tuesday, February 9, 2016

ಇದೆ ನಾಡು ಇದೆ ಭಾಷೆ ಎಂದೆಂದೂ ನಮ್ಮದಾಗಿರಲಿ

ಚಿತ್ರ: ತಿರುಗು ಬಾಣ
ರಚನೆ: ಅರ. ಏನ್. ಜಯಗೋಪಾಲ್ (?)
ಗಾಯನ: ಎಸ್. ಪಿ. ಬಾಲಸುಬ್ರಮಣ್ಯಂ

ಇದೆ ನಾಡು ಇದೆ ಭಾಷೆ ಎಂದೆಂದೂ ನಮ್ಮದಾಗಿರಲಿ, 
ಎಲ್ಲೇ ಇರಲಿ ಹೇಗೆ ಇರಲಿ ಕನ್ನಡವೇ ನಮ್ಮ ಉಸಿರಲ್ಲಿ - ೨
ಕರುನಾಡು ಸ್ವರ್ಗದ ಸೀಮೆ, ಕಾವೇರಿ ಹುಟ್ಟಿದ ನಾಡು,
ಕಲ್ಲಲಿ ಕಲೆಯನು ಕಂಡ, ಬೇಲೂರು ಶಿಲ್ಪದ ಬೀಡು
ಬಸವೇಶ್ವರ, ರನ್ನ-ಪಂಪರ ಸವಿ ವಾಣಿಯ ನಾಡು
ಚಾಮುಂಡಿ ರಕ್ಷೆಯು ನಮಗೆ, ಗೊಮಟೆಷ ಕಾವಲು ಇಲ್ಲಿ,
ಶ್ರಿಂಗೇರಿ ಶಾರದೆ ವೀಣೆ, ರಸ ತುಂಗೆ ಆಗಿದೆ ಇಲ್ಲಿ,
ವಿಶ್ವಖ್ಯಾತಿಯ ವಿಶ್ವೇಶ್ವರಯ್ಯ ಜನಿಸಿದ ಈ ನಾಡು
ಏಳೇಳು ಜನ್ಮವೇ ಬರಲಿ ಈ ಮಣ್ಣಲಿ ನಾನು ಹುಟ್ಟುವೆ,
ಎನೇನು ಕಷ್ಟವೇ ಇರಲಿ ಸಿರಿಗನ್ನಡ ತಾಯ್ಗೆ ದುಡಿವೆ,
ತನು ಕನ್ನಡ ನುಡಿ ಕನ್ನಡ ಮನ ಕನ್ನಡವಾಗಿರಲಿ
ಇದೆ ನಾಡು ಇದೆ ಭಾಷೆ ಎಂದೆಂದೂ ನಮ್ಮದಾಗಿರಲಿ, 
ಎಲ್ಲೇ ಇರಲಿ ಹೇಗೆ ಇರಲಿ ಕನ್ನಡವೇ ನಮ್ಮ ಉಸಿರಲ್ಲಿ
ಇದೆ ನಾಡು ಇದೆ ಭಾಷೆ ಎಂದೆಂದೂ ನಮ್ಮದಾಗಿರಲಿ