Welcome To Always Lucky

View life as a continuous learning experience.

Friday, April 22, 2016

ಗೀತ- ಕೇಳದೆ ನಿಮಗೀಗ ದೂರದಲ್ಲಿ ಯಾರೋ ಹಾಡು ಹೇಳಿದಂತೆ

ಚಿತ್ರ: ಗೀತ
ಹಾಡಿದವರು: ಎಸ್ ಪಿ ಬಾಲು 
ನಟರು: ಶಂಕರ್ ನಾಗ್ 

ಕೇಳದೆ ನಿಮಗೀಗ ದೂರದಲ್ಲಿ ಯಾರೋ ಹಾಡು ಹೇಳಿದಂತೆ 
ಒಂದು ಹೆಣ್ಣಿನ... ಓ..... ನೊಂದ ವಿರಹ ಗೀತೆ

ಸಂಪಿಗೆ ಒಂದೂರು ಮಲ್ಲಿಗೆ ಒಂದೂರು, ನಡುವಲ್ಲಿ ನದಿಯೊಂದು
ಹಗ್ಗದ ಉಯ್ಯಾಲೆ ತೂಗುವ ಹಾಗೊಂದು, ಸೇತುವೆಯು ಅಲ್ಲೊಂದು
ಈ ಊರ ಚೆಲುವೆ ಆ ಊರ ಚೆಲುವ, ನದಿಯಂಚಲಿ ಓಡಾಡುತ ಎದುರಾದರು ಒಮ್ಮೆ

ಚೆಲುವೆಯ ಕಂಡಾಗ ಚೆಲುವನ ಮನದಲ್ಲಿ ನೂರಾಸೆ ಬಂದಾಗ 
ಚೆಲುವೆಯ ಕಣ್ಣಲ್ಲಿ ಚೆಲುವನು ಮನೆಮಾಡಿ ಶಿಲೆಯಂತೆ ನಿಂತಾಗ 
ಹೂವಾಗಿ ಮನಸು ನೂರಾರು ಕನಸು ಬೆರಗಾದರು ಒಲವಿಂದಲಿ ಒಂದಾದರು ಆಗ........

ಚೆಲುವೆಯ ಮಾವಯ್ಯ ಒಲವಿನ ಕತೆ ಕೇಳಿ ಹುಲಿಯಂತೆ ಎಗರಾಡಿ
ಸೇತುವೆ ಬಳಿ ಬಂದಾಗ ಪ್ರೇಮಿಗಳ ಕಂಡಾಗ ರೋಷದಲಿ ಕೂಗಾಡಿ 
ಹಲ್ಲನ್ನು ಮಸೆದ ಸೇತುವೆಯ ಕಡಿದ
ಆ ಜೋಡಿಯ ಕತೆಯಂದಿಗೆ ಕೊನೆಯಾಯಿತು ಹೀಗೆ........

ಮನಸಾರೆ -ನಾ ನಗುವ ಮೊದಲೆನೆ ಮಿನುಗುತಿದೆ ಯಾಕೋ ಹೊಸ ಮುಗುಳು ನಗೆ

ಚಿತ್ರ: ಮನಸಾರೆ
ಹಾಡಿದವರು: ಶ್ರೇಯ ಗೋಶಲ್ 
ನಟರು: ದಿಗಂತ್, ಐನ್ದ್ರಿತ

ನಾ ನಗುವ ಮೊದಲೆನೆ ಮಿನುಗುತಿದೆ ಯಾಕೋ ಹೊಸ ಮುಗುಳು ನಗೆ
ನಾ ನುಡಿವ ಮೊದಲೆನೆ ತೊದಲುತಿದೆ ಹೃದಯವಿದು ಒಳಗೊಳಗೇ
ನಾ ನಡೆವ ಮೊದಲೆನೆ ಎಳೆಯುತಿದೆ ದಾರಿಯಿದು ನಿನ್ನೆಡೆಗೆ
ನಾ ಅರಿವ ಮೊದಲೆನೆ ಉರಿಯುತಿದೆ ದೀಪವಿದು ನನ್ನೊಳಗೆ
ಒಂದು ಬಾರಿ ಹೇಳು ಮೆಲ್ಲಗೆ ಯಾರು ಯಾರು ನೀನನಗೆ?

ತಿಳಿಸದೇ ನನಗೆ ಹುಡುಕಿವೆ ನಿನ್ನ ನನ್ನಯ ಕಣ್ಣು
ಈ ಸಂಕಟ ಸಾಕಾಗಿದೆ ಮುಂದೇನು
ಕಲಿತಿದೆ ಮನವು ಕುಣಿಯುವುದನ್ನು ಕಂಡರೆ ನೀನು
ನಾನು ನನ್ನ ಪಾಡಿಗಿರಲು ಯಾಕೆ ಕಂಡೆ ನೀನನಗೆ?

ಕನವರಿಕೆಯಲಿ ನಿನ್ನಯ ಹೆಸರ ಕರೆಯಿತೆ ಹೃದಯ
ನನಗೇತಕೆ ನನ್ನ ಮೇಲೆಯೇ ಈ ಸಂಶಯ
ಬರಿ ಕನಸಿನಲೇ ಆಗುವೆ ಏಕೆ ನನ್ನಯ ಇನಿಯ
ಹೇಳು ಒಮ್ಮೆ ಹೇಳು ಇದುವೇ ಪ್ರೀತಿಯೆಂದು ನೀನನಗೆ

ನಾ ನಗುವ ಮೊದಲೆನೆ.........  

ಮಿಲನ - ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ

ಚಿತ್ರ: ಮಿಲನ 
ಗಾಯನ: ಸೋನು ನಿಗಮ್ 
ನಟರು: ಪುನೀತ್ ರಾಜ್ ಕುಮಾರ್, ಪಾರ್ವತಿ 

ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ 
ನಿನ್ನಿಂದಲೇ ನಿನ್ನಿಂದಲೇ ಮನಸಿಂದು ಕುಣಿದಾಡಿದೆ 
ಈ ಎದೆಯಲ್ಲಿ ಸಿಹಿಯಾದ ಕೋಲಾಹಲ 
ನನ್ನೆದುರಲ್ಲೇ ನೀ ಹೀಗೆ ಬಂದಾಗಲೇ 
ನಿನ್ನ ತುಟಿಯಲ್ಲಿ ನಗುವಾಗುವ ಹಂಬಲ 
ನಾ ನಿಂತಲ್ಲೇ ಹಾಳಾದೆ ನಿನ್ನಿಂದಲೇ....

ಇರುಳಲ್ಲಿ ಜ್ವರದಂತೆ ಕಾಡಿ ಈಗ 
ಹಾಯಾಗಿ ನಿಂತಿರುವೆ ಸರಿಯೇನು 
ಬೇಕಂತಲೇ ಮಾಡಿ ಏನೋ ಮೋಡಿ
ಇನ್ನೆಲ್ಲೋ ನೋಡುವ ಪರಿಯೇನು 
ಈ ಮಾಯೆಗೆ ಈ ಮರುಳಿಗೆ ನಿನ್ನಿಂದ ಕಳೆ ಬಂದಿದೆ.......ನಿನ್ನಿಂದಲೆ....

ಹೋದಲ್ಲಿ ಬಂದಲ್ಲಿ ಎಲ್ಲ ನಿನ್ನ 
ಸೊಂಪಾದ ಚೆಲುವಿನ ಗುಣಗಾನ
ಕೇದಿಗೆ ಗರಿಯಂಥ ನಿನ್ನ ನೋಟ 
ನನಗೇನೋ ಅಂದಂತೆ ಅನುಮಾನ 
ನಿನ್ನಿಂದಲೆ ಸದ್ದಿಲ್ಲದೆ ಮುದ್ದಾದ ಕರೆ ಬಂದಿದೆ....ನಿನ್ನಿಂದಲೆ....

ಮೊಗ್ಗಿನ ಮನಸ್ಸು - ನೂರಾರು ಪ್ರೀತಿ ಮಾತು ನೂರಾರು ಸಾರಿ ಆಡಿ

ಚಿತ್ರ: ಮೊಗ್ಗಿನ ಮನಸ್ಸು
ಗಾಯನ: ಸೋನು ನಿಗಮ್
ನಟರು: ಯಶ್, ರಾಧಿಕ ಪಂಡಿತ್

i love you......ಓ....
i love you......

ನೂರಾರು ಪ್ರೀತಿ ಮಾತು ನೂರಾರು ಸಾರಿ ಆಡಿ
ನೀನೇನೆ ಜೀವ ಎಂದು ನೂರಾರು ಆಣೆ ಮಾಡಿ
ಕಾರಣವೇ ಹೇಳದೆ ಏಕೆ ನನ್ನ ಬಿಟ್ಟು ಹೋದೆ
ನೀನೆಲ್ಲೇ ಹೋದರು ಏನು ನೀನನ್ನ ಮರೆತರು ಏನು
ನೀನೇನೆ ಮಾಡಿದರೇನು ನಿನ್ನನ್ನೇ ಮರೆಯುವೆಯೇನು
ನಿನ್ನಲ್ಲೇ ನಾನು ಅವಿತು ಕುಳಿತಿಲ್ಲವೇನು....

ನೀನು ಇರದೇ ಬದುಕುವುದನ್ನು ಕಲಿಯೋ ಸಾಹಸದಲ್ಲಿ
ನಿನ್ನ ನೆನಪೆ ಎದುರು ನಿಂತು ಸೋತಿಹೆ ನಾನು ಇಲ್ಲಿ
ಬಿಟ್ಟು ಹೋದ ಆ ಘಳಿಗೆ ನೆನೆದು ನೆನೆದು ಈ ಘಳಿಗೆ
ಜಾರುವ ಕಂಬನಿ ಜಾರಲು ಬಿಟ್ಟು ಸುಮ್ಮನೆ ಹಾಗೆ ಕೂತಿರುವೆ......

ನನ್ನೆದೆ ಗುಡಿಯ ನಂದಾದೀಪ ಆರಿಸಿ ಹೋದೆ ನೀನು
ಕತ್ತಲೆ ಕೋಣೆಯ ಒಳಗೂ ನಿನ್ನ ನೆನಪಲೆ ಬೆಂದೆ ನಾನು
ದೂರ ಹೋದೆ ನೀನೆಂದು ದೂರಲಾರೆ ನಿನ್ನೆಂದು
ನಿನ್ನ ನೆನಪ ಬಂಧನದಲ್ಲೇ ಸಾಯೋವರೆಗು ಕಾಯುವೆನು.....

ಮಾನಸ ಸರೋವರ - ವೇದಾಂತಿ ಹೇಳಿದನು ಹೊನ್ನೆಲ್ಲ ಮಣ್ಣು ಮಣ್ಣು

ಚಿತ್ರ: ಮಾನಸ ಸರೋವರ 
ಹಾಡಿದವರು: ಪಿ ಬಿ ಶ್ರೀನಿವಾಸ್ 
ನಟರು: ಶ್ರೀನಾಥ್, ಪದ್ಮ ವಾಸಂತಿ, ರಾಮಕೃಷ್ಣ 

ವೇದಾಂತಿ ಹೇಳಿದನು ಹೊನ್ನೆಲ್ಲ ಮಣ್ಣು ಮಣ್ಣು 
ಕವಿಯೊಬ್ಬ ಹಾಡಿದನು ಮಣ್ಣೆಲ್ಲ ಹೊನ್ನು ಹೊನ್ನು 

ವೇದಾಂತಿ ಹೇಳಿದನು ಈ ಹೆಣ್ಣು ಮಾಯೆ ಮಾಯೆ 
ಕವಿಯೊಬ್ಬ ಕನವರಿಸಿದನು, ಹೂ ಇವಳೆ ಚೆಲುವೆ ಚೆಲುವೆ 
ಇವಳ ಜೊತೆಯಲ್ಲಿ ನಾ ಸ್ವರ್ಗವನೇ ಗೆಲ್ಲುವೆ 
ನಾ ಸ್ವರ್ಗವನೇ ಗೆಲ್ಲುವೆ 

ವೇದಾಂತಿ ಹೇಳಿದನು......

ವೇದಾಂತಿ ಹೇಳಿದನು, ಈ ಬದುಕು ಶೂನ್ಯ ಶೂನ್ಯ 
ಕವಿ ನಿಂತು ಸಾರಿದನು, ಓ ಇದು ಅಲ್ಲ ಶೂನ್ಯ 
ಜನ್ಮ ಜನ್ಮದಿ ಸವಿದೆ ನಾನೆಷ್ಟು ಧನ್ಯ ಧನ್ಯ 
ನಾನೆಷ್ಟು ಧನ್ಯ ಧನ್ಯ 

ವೇದಾಂತಿ ಹೇಳಿದನು.....

ಅಮೃತ ವರ್ಷಿಣಿ-ತುಂತುರು ಅಲ್ಲಿ ನೀರ ಹಾಡು

ಚಿತ್ರ: ಅಮೃತ ವರ್ಷಿಣಿ
ಗಾಯಕಿ: ಕೆ ಎಸ್ ಚಿತ್ರ
ನಟರು: ಸುಹಾಸಿನಿ, ರಮೇಶ್, ಶರತ್ ಬಾಬು

ತುಂತುರು ಅಲ್ಲಿ ನೀರ ಹಾಡು
ಕಂಪನ ಇಲ್ಲಿ ಪ್ರೀತಿ ಹಾಡು
ಹಗಲಿರಲಿ ಇರುಳಿರಲಿ ನೀನಿರದೆ ಹೇಗಿರಲಿ
ನನ್ನ ತುಂಬು ಹೃದಯ ನೀ ತುಂಬಿದೆ
ನಿನ್ನ ಈ ತುಂಬು ಪ್ರೀತಿಯನು
ಕಣ್ಣ ಹಾಡಂತೆ ಕಾಯುವೆನು

ಗಗನದ ಸೂರ್ಯ ಮನೆ ಮೇಲೆ
ನೀ ನನ್ನ ಸೂರ್ಯ ಹಣೆ ಮೇಲೆ
ಚಿಲಿಪಿಲಿ ಹಾಡು ಎಲೆ ಮೇಲೆ
ನಿನ್ನ್ನ ಪ್ರೀತಿ ಹಾಡು ಎದೆ ಮೇಲೆ
ಗಾಳಿ ಗಾಳಿ ತಂಪು ಗಾಳಿ
ಊರ ತುಂಬ ಇದೆಯೋ
ನಿನ್ನ ಹೆಸರ ಗಾಳಿಯೊಂದೆ
ನನ್ನ ಉಸಿರಲ್ಲಿದೆಯೋ
ನಮ್ಮ ಪ್ರೀತಿ ಬೆಳಗೋ ಇತಿಹಾಸವು
ನಿನ್ನ ಸಹಚಾರವೇ ಚೈತ್ರ
ಅಲ್ಲಿ ನನ್ನ ಇಂಚರ ಅಮರ

ಚೆಲುವನೆ ನಿನ್ನ ಮುಗುಳು ನಗೆ
ಹಗಲಲು ಶಶಿಯು ಬೇಡುವನು
ರಸಿಕನೆ ನಿನ್ನ ರಸಿಕತೆಗೆ
ಮದನನು ಮರುಗಿ ಸೊರಗುವನು
ತಾಯಿ ತಂದೆ ಎಲ್ಲ ನೀನೆ
ಯಾಕೆ ಬೇರೆ ನಂಟು
ಸಾಕು ಎಲ್ಲ ಸಿರಿಗಳ ಮೀರೋ
ನಿನ್ನ ಪ್ರೀತಿ ಗಂಟು
ಜಗವೆಲ್ಲ ಮಾದರಿ ಈ ಪ್ರೇಮಕೆ
ನನ್ನ ಎದೆಯಾಳೋ ಧಣಿ ನೀನೆ
ನಿನ್ನ ಸಹಚಾರಿಣಿ ನಾನೇ

ಅಮೃತ ವರ್ಷಿಣಿ - ಮನಸೇ ಈ ಬದುಕು ನಿನಗಾಗಿ ಬವಣೆ ನಿನಗಾಗಿ

 

ಚಿತ್ರ: ಅಮೃತ ವರ್ಷಿಣಿ  
ಗಾಯಕ: ಎಸ್ ಪಿ ಬಾಲು  
ನಟರು: ಸುಹಾಸಿನಿ, ರಮೇಶ್, ಶರತ್ ಬಾಬು  

ಮನಸೇ ಈ ಬದುಕು ನಿನಗಾಗಿ ಬವಣೆ ನಿನಗಾಗಿ  
ನನ್ನ ಪ್ರೀತಿಯೇ ಸುಳ್ಳಾದರೆ ಜಗವೆಲ್ಲ ಸುಳ್ಳು ಅಲ್ಲವೇ  

ನಿನ್ನ ಒಂದು ಮಾತು ಸಾಕು ಮರುಮಾತು ಎಲ್ಲಿ  
ನಿನ್ನ ಒಂದು ಆಣತಿ ಸಾಕು ನಾ ಅಡಿಗಳಲ್ಲಿ  
ನಿನ್ನ ಒಂದು ಹೆಸರೇ ಸಾಕು ಉಸಿರಾಟಕಿಲ್ಲಿ     
ನಿನ್ನ ಒಂದು ಸ್ಪರ್ಶ ಸಾಕು ಈ ಜನುಮದಲ್ಲಿ  
ಮನಸೇ ನಾ ಏನೇ ಮಾಡಿದರು ನಿನ್ನ ಪ್ರೀತಿಗಲ್ಲವೇ
ಮನಸೇ ಮನಸ ಕ್ಷಮಿಸೆ......

ನನ್ನ ಪ್ರೀತಿ ಗಂಗೆ ನೀನು ಮುಡಿಸೇರಲೆಂದೇ
ಸಮಯಗಳ ಸರಪಳಿಯಲ್ಲಿ ಕೈ ಗೊಂಬೆಯಾದೆ  
ನನ್ನ ಬಾಳ ಪುಟಕೆ ನೀನು ಹೊಸ ತಿರುವು ತಂದೆ
ನಿನ್ನ ಮರೆತು ಹೋದರೆ ಈಗ ಬದುಕೇಕೆ ಮುಂದೆ
ಮನಸೇ ನಾ ಏನೇ ಮಾಡಿದರು ನಿನ್ನ ಪ್ರೀತಿಗಲ್ಲವೇ
ಮನಸೇ ಮನಸ ಹರಿಸೆ.....

Modala maleyanthe

Modala maleyanthe
Yedege ilide mellage
Modala kanasanthe
Olave olide ommege

Chaachida kaige aakashave thaagide
Geechida haage malebille maigantide
Hosa samvatsara hosa manvantara
Shuruvaagide aagide eege

Modala maleyanthe
Yedege ilide mellage

Voho..............

Nee nanage siguva munna
Ellellu baride mouna
Koti koti swara
Omme chimmo thara
Bande nee hathira
Ninthe baanethara

Kanmucchi kanbittare O..
Badalaagide ee dhare
Hosa samvatsara hosa manvantara
Shuruvaagide aagide eega

Ondondu khushigoo indu
Naaniduva hesarenindu
Nanna ekaanthake anthya nee haadide
Sundara swargake nanna nee doodide

Kanmunde neeniddare O..
Eee lokake naa dore
Hosa samvatsara hosa manvantara
Shuruvaagide aagide eega

Hmm.......

ಈ ಭೂಮಿ ಬಣ್ಣದ ಬುಗುರಿ

ಒಹೋ ಓಹೋ 
ಭೂಮಿ ಬಣ್ಣದ ಬುಗುರಿ
ಶಿವನೇ ಚಾಟಿ ಕಣೋ
ಬಾಳು ಸುಂದರ ನಗರಿ
ನೀನಿದರ ಮೇಟಿ ಕಣೋ

ನಿಂತಾಗ ಬುಗುರಿಯ ಆಟ
ಎಲ್ಲಾರು ಒಂದೆ ಓಟ
ಕಾಲ ಕ್ಷಣಿಕ ಕಣೋ

ಭೂಮಿ ಬಣ್ಣದ ಬುಗುರಿ
ಶಿವನೇ ಚಾಟಿ ಕಣೋ
ಬಾಳು ಸುಂದರ ನಗರಿ
ನೀನಿದರ ಮೇಟಿ ಕಣೋ

ಮರಿಬೇಡ ತಾಯಿಯ ಋಣವ
ಮರಿಬೇಡ ತಂದೆಯ ಒಲವ
ಹಡೆದವರೇ ದೈವ ಕಣೋ
ಸುಖವಾದ ಬಾಷೆಯ ಕಲಿಸೊ
ಸರಿಯಾದ ದಾರಿಗೆ ನೆಡೆಸೊ
ಸಂಸ್ಕೃತಿಯೇ ಗುರುವು ಕಣೋ

ಮರೆತಾಗ ಜೀವನ ಪಾಠ
ಕೊಡುತಾನೆ ಚಾಟಿಯ ಏಟ
ಕಾಲ ಕ್ಷಣಿಕ ಕಣೋ

ಭೂಮಿ ಬಣ್ಣದ ಬುಗುರಿ
ಶಿವನೇ ಚಾಟಿ ಕಣೋ
ಬಾಳು ಸುಂದರ ನಗರಿ
ನೀನಿದರ ಮೇಟಿ ಕಣೋ

ಮರಿಬೇಡ ಮಗುವಿನ ನಗುವ
ಕಳಿಬೇಡ ನಗುವಿನ ಸುಖವ
ಭರವಸೆಯೇ ಮಗುವು ಕಣೇ

ಕಳಬೇಡ ಕೊಲ್ಲಲು ಬೇಡ
ನೀ ಹಾಡು ಶಾಂತಿಯ ಹಾಡ
ಜೀವನವೇ ಪ್ರೀತಿ ಕಣೋ

ನಿಂತಾಗ ಬುಗುರಿಯ ಆಟ
ಎಲ್ಲಾರು ಒಂದೆ ಓಟ
ಕಾಲ ಕ್ಷಣಿಕ ಕಣೋ

ಭೂಮಿ ಬಣ್ಣದ ಬುಗುರಿ
ಶಿವನೇ ಚಾಟಿ ಕಣೋ

ಬಾಳು ಸುಂದರ ನಗರಿ

ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು 

ಹೇಹೆ ಹೇ.. ಓಹೊ ಹೋ
ಹಾ ಹಾ ಹಾ .. 

ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು 
ನೆಲವ ಬಿಟ್ಟು ನೀರ ಮೇಲೆ ಬಂಡಿ ಹೋಗದು 
ನಿನ್ನ ಬಿಟ್ಟು ನನ್ನ, ನನ್ನ ಬಿಟ್ಟು ನಿನ್ನ
ಜೀವನ ಸಾಗದು, ಜೀವನ ಸಾಗದು 
ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು .. 

ಸೂರ್ಯ ಬರದೆ ಕಮಲವೆಂದು ಅರಳದು 
ಚಂದ್ರನಿರದೆ ತಾರೆಯೆಂದು ನಲಿಯದು 
ಸೂರ್ಯ ಬರದೆ ಕಮಲವೆಂದು ಅರಳದು 
ಚಂದ್ರನಿರದೆ ತಾರೆಯೆಂದು ನಲಿಯದು 
ಒಲವು ಮೂಡದಿರಲು ಮನವು ಅರಳದು 
ಮನವು ಅರಳದಿರಲು ಗೆಲುವು ಕಾಣದು 
ಮನವು ಅರಳದಿರಲು ಗೆಲುವು ಕಾಣದು 

ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು 
ನೆಲವ ಬಿಟ್ಟು ನೀರ ಮೇಲೆ ಬಂಡಿ ಹೋಗದು 
ನಿನ್ನ ಬಿಟ್ಟು ನನ್ನ, ನನ್ನ ಬಿಟ್ಟು ನಿನ್ನ
ಜೀವನ ಸಾಗದು, ಜೀವನ ಸಾಗದು 
ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು .. 

ಲೋಕದಲ್ಲಿ ಗಂಡು ಹೆಣ್ಣಿಗಾಸರೆ 
ಆದರಿಲ್ಲಿ ನಾನು ನಿನ್ನ ಕೈಸೆರೆ 
ಲೋಕದಲ್ಲಿ ಗಂಡು ಹೆಣ್ಣಿಗಾಸರೆ 
ಆದರಿಲ್ಲಿ ನಾನು ನಿನ್ನ ಕೈಸೆರೆ 
ಕೂಡಿ ನಲಿವ ಆಸೆ ಮನದಿ ಕಾದಿದೆ 
ಹಿತವು ಎಲ್ಲಿ ನಾವು ಬೇರೆಯಾದರೆ
ಹಿತವು ಎಲ್ಲಿ ನಾವು ಬೇರೆಯಾದರೆ

ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು 
ನೆಲವ ಬಿಟ್ಟು ನೀರ ಮೇಲೆ ಬಂಡಿ ಹೋಗದು 
ನಿನ್ನ ಬಿಟ್ಟು ನನ್ನ, ನನ್ನ ಬಿಟ್ಟು ನಿನ್ನ
ಜೀವನ ಸಾಗದು, ಪಾವನ ಆಗದು 
ಆಹಹ ಆಹಹ.. ಮ್ ಮ್ .. 

ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು ..